Tuesday, July 8, 2025

ಶಾಸಕ ಮುನಿರತ್ನ ಬಂಧನ

ಆಂಧ್ರಪ್ರದೇಶದ ಚಿತ್ತೂರಿಗೆ ಪಲಾಯಾನ‌ ಮಾಡುವ ವೇಳೆ ಮುನಿರತ್ನರನ್ನು ನುಂಗಲಿ ಬಳಿ ವಶಕ್ಕೆ ಪಡೆಯಲಾಗಿದೆ ಗುತ್ತಿಗೆದಾರ ಚೆಲುವರಾಜು ಮುಖ್ಯ ಮಂತ್ರಿ ಸಿದ್ದರಾಮಯ್ಯ ರವರಿಗೆ ಮನವಿ ಕೊಟ್ಟ ಒಂದೇ ಗಂಟೆಯಲ್ಲಿ ಪೊಲೀಸರು ಮುನಿರತ್ನರನ್ನು ವಶಕ್ಕೆ ಪಡೆದಿದ್ದಾರೆ,

ಬೆಂಗಳೂರಿನ BBMP ಗುತ್ತಿಗೆದಾರನಿಗೆ ಲಂಚ ಕೇಳಿದ್ದಲ್ಲದೆ ಜಾತಿ ನಿಂದನೆ ಹಾಗೂ ಜೀವಬೆದರಿಕೆ ಹಾಕಿದ್ದ ಆರ್,ಆರ್, ನಗರ ಶಾಸಕ ಮುನಿರತ್ನ ವಿರುದ್ಧ ದೂರು ದಾಖಲಾಗಿತ್ತು ಇತ್ತ ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಶಾಸಕ ಮುನಿರತ್ನರನ್ನು ಕೋಲಾರ ಜಿಲ್ಲೆಯ ಬಳಿ ಶನಿವಾರ ಸಂಜೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ,

ಕೋಲಾರ ಪೊಲೀಸರ ನೆರವಿನೊಂದಿಗೆ ಮುಳಬಾಗಲು ತಾಲ್ಲೂಕಿನ ನಂಗಲಿ ಬಳಿ ಬೆಂಗಳೂರಿನ ಪೊಲೀಸರು ಶಾಸಕ ಮುನಿರತ್ನನನ್ನು ವಶಕ್ಕೆ ಪಡೆಯಲಾಗಿದೆ ಕೋಲಾರ ಜಿಲ್ಲೆಯ ಮುಳಬಾಗಿಲು ಮಾರ್ಗವಾಗಿ ಆಂದ್ರಪ್ರದೇಶಕ್ಕೆ ತೆರಳುತ್ತಿದ್ದ ವೇಳೆ ಖಚಿತ ಮಾಹಿತಿ ಪಡೆದು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ

About The Author

Related Articles

Stay Connected

0FansLike
0FollowersFollow
22,400SubscribersSubscribe
- Advertisement -spot_img

Latest Articles