Monday, July 7, 2025

ಸಗಣಿ ಪೇಂಟ್ ಅಭಿಷೇಕ ಸಿದ್ದಲಿಂಗೇಶ್ವರನ ದೇವಾಲಯಕ್ಕೆ

ತಪೋ ಕ್ಷೇತ್ರ ಕಗ್ಗೆರೆ ದೇವಾಲಯಕ್ಕೆ ಸಗಣಿ ಬಣ್ಣದ ಅಭಿಷೇಕ
ಏನಿದು ಸಗಣಿ ಬಣ್ಣದ ಅಭಿಷೇಕ ಎಂಬ ವಿಚಾರ ನಿಮ್ಮನ್ನು ಗೊಂದಲಕ್ಕೆ ಉಂಟು ಮಾಡಿರಬಹುದು

ಹೌದು ಶ್ರೀ ಸಿದ್ದಲಿಂಗೇಶ್ವರನ ಹುತ್ತದ ಮೇಲೆ ಹಾಲು ಕರೆಯುವ ಹಸುವಿನಿಂದ ಸಂಗ್ರಹಿಸಿದ ಸಗಣಿಯಿಂದ ಬಣ್ಣವನ್ನು ತಯಾರಿಸಿ ಸಿದ್ದಲಿಂಗೇಶ್ವರನ ದೇವಾಲಯಕ್ಕೆ ಪೇಂಟಿಂಗ್ ಮಾಡಲಾಗಿದೆ.


ತಪೋ ಕ್ಷೇತ್ರ ಕಗ್ಗೆರೆಯ ಗ್ರಾಮದಲ್ಲಿರುವ ಶ್ರೀ ಸಿದ್ದಲಿಂಗೇಶ್ವರ ದೇವಾಲಯದ ಜೀರ್ಣೋದ್ಧಾರ ಕಾಮಗಾರಿಯನ್ನು ನೆಲಮಂಗಲದ ಬಸವಣ್ಣ ದೇವರ ಮಠದ ವತಿಯಿಂದ ನಡೆಸಲಾಗುತ್ತಿತ್ತು
ಈ ಸಂದರ್ಭದಲ್ಲಿ ದೇವಾಲಯಕ್ಕೆ ಬಣ್ಣ ಬಳಿಯುವ ಅನಿವಾರ್ಯತೆ ಇದ್ದ ಕಾರಣ ಸಿದ್ದಲಿಂಗೇಶ್ವರರು ಗೋಪ್ರಿಯರಾಗಿದ್ದರು ಎಂಬ ಕಾರಣಕ್ಕೆ ಗೋ ಉತ್ಪನ್ನವಾದ ಗೋಮಯ ಪೇಂಟಿಂಗ್ ಬಣ್ಣ ಮಾಡಿದ್ದಾರೆ
ದೇವಾಲಯದ ಕಾಮಗಾರಿ ಸಂಪೂರ್ಣ ಮುಕ್ತಾಯ ಹಂತ ತಲುಪಿದ್ದು ಫೆಬ್ರವರಿ 23ರ ಭಾನುವಾರ ಗುರುಗಳ ಪಾದಪೂಜೆ ಮತ್ತು ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ

About The Author

Related Articles

Stay Connected

0FansLike
0FollowersFollow
22,400SubscribersSubscribe
- Advertisement -spot_img

Latest Articles