Sunday, July 6, 2025

16ರ ಬಾಲೆಯ ಸಾವಿಗೆ ಲವ್ ಜಿಹಾದ್ ನಂಟು

ತಾಲೂಕಿನ ಯಡಿಯೂರು ಹೋಬಳಿಯ ನಾಗೇಗೌಡನ ಪಾಳ್ಯದ ದಲಿತ ಬಾಲಕಿ ಸುಮಾ (16)ಳನ್ನು ಪ್ರೀತಿಸು ಎಂದು ಪೀಡಿಸುತ್ತಿದ್ದ ಮುಸಲ್ಮಾನ್ ಯುವಕನನ್ನ ಉಪಟಳದಿಂದ ಬೇಸತ್ತು ನೇಣಿಗೆ ಶರಣಾದ ಘಟನೆ ಅಮೃತೂರು ಪೊಲೀಸ್ ಠಾಣೆಯಲ್ಲಿ ನಡೆದಿದೆ .

ಯಡಿಯೂರು ಹೋಬಳಿಯ ನಾಗೇಗೌಡನ ಪಾಳ್ಯದ ಬಾಲಕಿ ಸುಮಾ(16) ಕುಣಿಗಲ್ ಪಟ್ಟಣದ ಮಹಾತ್ಮ ಗಾಂಧಿ ಪ್ರೌಢಶಾಲೆಯಲ್ಲಿ ಒಂಬತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು,

ಕಳೆದ ಕೆಲವು ದಿನಗಳಿಂದ ಮುಸಲ್ಮಾನ್ ಯುವಕನೊಬ್ಬ ಆಕೆಯನ್ನು ಪ್ರೀತಿಸು ಎಂದು ಪೀಡಿಸುತ್ತಾ ಹಲವಾರು ಬಾರಿ ಆಕೆಯ ಮೇಲೆ ಹಲ್ಲೆ ಮಾಡಿದ ಎನ್ನಲಾಗಿದೆ,


ಕಳೆದ ಕೆಲವು ದಿನಗಳ ಹಿಂದೆ ಕುಣಿಗಲ್ ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಆವರಣದಲ್ಲಿ ಮತ್ತು ಮಹಾತ್ಮ ಗಾಂಧಿ ಶಾಲಾ ಆವರಣದಲ್ಲಿ ವಿದ್ಯಾರ್ಥಿನಿಯ ಮೇಲೆ ಹಲ್ಲೆ ಮಾಡಿದ್ದ ಈ ಘಟನೆಯಿಂದ ಮನನೊಂದ ಬಾಲಕಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ,

ಮಗಳ ಸಾವಿನ ನಂತರ ಘಟನೆ ಪೋಷಕರಿಗೆ ತಿಳಿದು ನಂತರ ಅಮೃತೂರ್ ಪೊಲೀಸ್ ಠಾಣೆಯಲ್ಲಿ ಪ್ರಖರಣ ದಾಖಲಿಸಿದ್ದು ಈ ಸಂಬಂಧ ತನಿಖೆ ಆರಂಭಿಸಿದ್ದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

About The Author

Related Articles

Stay Connected

0FansLike
0FollowersFollow
22,400SubscribersSubscribe
- Advertisement -spot_img

Latest Articles