Sunday, July 6, 2025

ಶಾಲಾ ಬೀಳ್ಕೊಡುಗೆಯಿಂದ ಹೊರಟು ಮಸಣ ಸೇರಿದ ವಿದ್ಯಾರ್ಥಿನಿ

ಕುಣಿಗಲ್ ಪಟ್ಟಣದ ಸ್ಟೇಲ್ಲಾ ಮೇರಿಸ್ ಶಾಲೆಯಲ್ಲಿ ಬೀಳ್ಕೊಡುಗೆ ಮುಗಿಸಿ ಹೊರಟ 10 ನೇ ತರಗತಿ ವಿದ್ಯಾರ್ಥಿನಿ ಇಂದುಶ್ರೀ (16) ರಸ್ತೆಯ ಬೈಕ್ ಅಪಘಾತದಲ್ಲಿ ಮೃತಪಟ್ಟ ಘಟನೆ ನಡೆದಿದೆ

ಮೃತ ವಿದ್ಯಾರ್ಥಿ, ಕುಣಿಗಲ್ ತಾಲೂಕಿನ ಕೊತ್ತಕೆರೆ ಹೋಬಳಿಯ ಬಾಗೇನಹಳ್ಳಿ ಗ್ರಾಮದ ವಾಸಿಯಾಗಿದ್ದು ಕುಣಿಗಲ್ ಪಟ್ಟಣದ ಸ್ಟೆಲ್ಲಾ ಮೇರಿಸ್ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು,

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ 9ನೇ ತರಗತಿಯ ವಿದ್ಯಾರ್ಥಿಗಳು ಏರ್ಪಡಿಸಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ತನ್ನ ಸ್ವಗ್ರಾಮಕ್ಕೆ ತೆರಳುವಾಗ ಕುಣಿಗಲ್ ಪಟ್ಟಣದ ತುಮಕೂರು ರಸ್ತೆಯ ಶನಿ ದೇವಾಲಯದ ಮುಂಭಾಗದಲ್ಲಿ ಬರುತ್ತಿದ್ದ ಟ್ಯಾಕ್ಟರ್ ಮತ್ತು ಬೈಕ್ ನಡುವೆ ಉಂಟಾದ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸ್ಥಳದಲ್ಲಿ ಮೃತಪಟ್ಟಿದ್ದಾಳೆ,

ಕುಣಿಗಲ್ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಶವವನ್ನು ಇರಿಸಲಾಗಿತ್ತು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು
ಈ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ

About The Author

Related Articles

Stay Connected

0FansLike
0FollowersFollow
22,400SubscribersSubscribe
- Advertisement -spot_img

Latest Articles