Wednesday, July 15, 2026
Home Blog Page 5

ಕಾಲೇಜು ವಿದ್ಯಾರ್ಥಿಗಳ ಮುಂದೆ ಕಣ್ಣೀರು ಹಾಕಿದ ಮಂಡ್ಯ ಅಪರ ಜಿಲ್ಲಾಧಿಕಾರಿ

0

ತೆಂಗಿನ ಸಸಿ ನೆಡುವ ಗುಂಡಿ ತೆಗೆಯುವ ಕೂಲಿ ಮಾಡಿ ನಾಲ್ಕು ಸಾವಿರ ಸಂಪಾದಿಸಿ ಗುರಿ ಸಾಧಿಸಿದ್ದು ಅಂದು ತಾಯಿ ತೋರಿದ ಅಭಿಮಾನ ಬಡತನದ ನೋವು ನನ್ನನ್ನು ಮಂಡ್ಯ ಜಿಲ್ಲಾ ಅಪರ ಜಿಲ್ಲಾಧಿಕಾರಿ ಆಗುವಂತೆ ಪ್ರೇರೇಪಣೆ ಮಾಡಿದೆ ಎಂದು ಡಾ. ಎಚ್ ಎಲ್ ನಾಗರಾಜು ವೇದಿಕೆ ಮೇಲೆ ಕಣ್ಣೀರು ಹಾಕಿದ್ದಾರೆ,

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಕಾಲೇಜು ವತಿಯಿಂದ ಏರ್ಪಡಿಸಿದ್ದ ಸಾಂಸ್ಕೃತಿಕ,,ಕ್ರೀಡೆ, ಎನ್ಎಸ್ಎಸ್, ರೋವರ್ ಮತ್ತು ರೆಂಜರ್ ಹಾಗೂ ರೆಡ್ ಕ್ರಾಸ್ ಸಂಸ್ಥೆಗಳ ಚಟುವಟಿಕೆ ಸಮಾರಂಭ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು,

ತಾಲೂಕಿನ ಕೊತ್ತಕೆರೆ ಹೋಬಳಿಯ ಹೊನ್ನೇನಹಳ್ಳಿ ಗ್ರಾಮದಲ್ಲಿ ಜನಿಸಿ ಪ್ರತಿ ದಿನ ಹೊಲಗದ್ದೆಯಲ್ಲಿ ಕೆಲಸ ಮಾಡುತ್ತಾ ವಿದ್ಯಾಭ್ಯಾಸ ಪಡೆಯಲು ಬೇರೆಯವರ ಮನೆಯ ತೆಂಗಿನ ತೋಟದಲ್ಲಿ ಗುಂಡಿ ತೆಗೆಯುವ ಕೆಲಸ ಮಾಡಿ ಮೂರು ರೂಪಾಯಿ ಸಂಬಳ ಸಂಪಾದಿಸುತ್ತಿದ್ದೆ ಶಿಕ್ಷಣಕ್ಕೆ ಬೇಕಾದ ಅಗತ್ಯತೆಗಳನ್ನು ಈ ಕೂಲಿಯಿಂದಲೇ ಪೂರೈಸಿಕೊಂಡು ನಾನು ಬದುಕುತ್ತಿದ್ದೆ ಇಂತಹ ಸಂದರ್ಭದಲ್ಲಿ ಆಯಾಸದಿಂದ ಪ್ರಜ್ಞಹೀನನಾಗಿದ್ದಾಗ ತಾಯಿ ಮಗ ಸತ್ತನೆಂದು ಕಣ್ಣೀರು ಹಾಕಿದ ಘಟನೆಯನ್ನು ನೆನಪಿಸಿಕೊಂಡು ವೇದಿಕೆ ಮೇಲೆ ಕಣ್ಣೀರಿಟ್ಟರು,

ಈ ಘಟನೆಯಿಂದ ವೇದಿಕೆಯ ಮೇಲಿದ್ದ ಗಣ್ಯರು ಸೇರಿದಂತೆ ವಿದ್ಯಾರ್ಥಿಗಳ ಕಣ್ಣಲ್ಲಿ ನೀರುಜಿನುಗಲು ಆರಂಭಿಸಿತ್ತು,ತಾವು ಅನುಭವಿಸಿದ್ದ ಬಡತನ ಹಾಗೂ ಛಲದಿಂದ ಶಿಕ್ಷಣ ಕಲಿತ ಹಲವಾರು ಘಟನೆಗಳನ್ನು ವಿವರವಾಗಿ ವಿದ್ಯಾರ್ಥಿಗಳಿಗೆ ಹೇಳುವ ಮುಖಾಂತರ ಅವರ ಮನಸ್ಸಿನಲ್ಲಿ ಹಲವಾರು ಚೈತನ್ಯದ ಶಕ್ತಿ ತುಂಬುವ ಪ್ರಯತ್ನ ಮಾಡಿದರು,ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸಿದ್ದಲಿಂಗಪ್ಪ ಮಾತನಾಡಿ ಜೀವನದಲ್ಲಿ ಕಾಲೇಜು ಜೀವನ ಉತ್ತಮ ಸುಖಕರ ಆಗಬಾರದು ಶ್ರಮ ಶ್ರದ್ಧೆ ನಿಷ್ಠೆ ಸಾಧನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮುಂದಿನ ನಿಮ್ಮ ಬದುಕು ಸುಖಕರ ಆಗುತ್ತದೆ ಎಂದರು,

ಕಾಲೇಜು ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಡಾಕ್ಟರ್ ಗೋವಿಂದರಾಯ ಮಾತನಾಡಿ ಕಾಲೇಜಿನಲ್ಲಿ ಕಲಿಯುವ ವಿದ್ಯಾಭ್ಯಾಸ ನಿಮ್ಮ ಶಿಕ್ಷಣದ ಗುಣಮಟ್ಟ ಮತ್ತು ಅಂಕವನ್ನು ಬದಲಿಸುತ್ತದೆ ಜೊತೆ ಜೊತೆಯಲ್ಲಿ ತಂದೆ ತಾಯಿ ಗುರು ಹಿರಿಯರು ಸಮಾಜ ಸ್ನೇಹಿತರು ಇವರುಗಳಿಂದ ಕಳೆಯುವ ಶಿಕ್ಷಣ ನಿಮ್ಮ ಸಂಸ್ಕಾರದ ಜೊತೆಗೆ ಉತ್ತಮ ಬಾಂಧವ್ಯವನ್ನು ಸಮಾಜದಲ್ಲಿ ಬೆಳೆಸುತ್ತದೆ ಎಂದರು,ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಕಲಿಯಬೇಕೆಂದು ಸಲಹೆ ನೀಡಿದರು ಕಾರ್ಯಕ್ರಮದಲ್ಲಿ ಹಲವಾರು ವಿದ್ಯಾರ್ಥಿಗಳಿಗೆ ಮತ್ತು ಸಾಧಕರಿಗೆ ಅಭಿನಂದಿಸಲಾಯಿತು,ಈ ಸಂದರ್ಭದಲ್ಲಿ ಕಾಲೇಜು ಪ್ರಾಂಶುಪಾಲರಾದ ಪ್ರೊ ಮಾಯಾ ಸಾರಂಗಪಾಣಿ,ಪ್ರೊ ರಾಮಾ ನಂಜಪ್ಪ, ಡಾ. ಶಿವಕುಮಾರ್, ಡಾ. ರವೀಶ್ ಜಿಎಸ್, ಪ್ರೊ ಹನುಮಂತಪ್ಪ ಪ್ರೊ ನಾರಾಯಣದಾಸ್ ಪ್ರೊ ಶ್ರೀನಿವಾಸ ಪ್ರಭು ಪ್ರೊ ನಾಗಮ್ಮ ಪ್ರೋ ಸುರೇಶ್ ಪ್ರೊ ರುಕ್ಮಿಣಿ ಸೇರಿದಂತೆ ಹಲವಾರು ಕಾಲೇಜು ಸಿಬ್ಬಂದಿಗಳು ವಿದ್ಯಾರ್ಥಿಗಳು ಇದ್ದರೂ

ದೇಗುಲ’ ಎಂದು ತಾಜ್‌ಮಹಲ್‌ನಲ್ಲಿ ಗಂಗಾಜಲ ಅರ್ಪಿಸಿದ ಇಬ್ಬರ ಬಂಧನ

0
tonga people,tonga whales,kingdom of tonga,real story of jawan,hunga tonga volcano eruption,hunga tonga volcano,who invented airplane first time,who invented airplane,hunga tonga,gateway of india,story of jayalalitha,tonga news today,mystery of flights,the memoirs of sherlock holmes (book),tonga travel tips,tonga travel guide,war of 1971 between pakistan and india,times of india,who is nathuram godse,tonga tour,tonga tourism,tonga volcano

ಆಗ್ರಾದ ಪ್ರಸಿದ್ಧ ಪ್ರವಾಸಿ ಸ್ಥಳ ತಾಜ್‌ಮಹಲ್‌ನಲ್ಲಿ ಪ್ಲಾಸ್ಟಿಕ್‌ ಬಾಟಲಿಯಲ್ಲಿ ತಂದಿದ್ದ ‘ಗಂಗಾಜಲ’ ಅರ್ಪಿಸಿದ ಬಲಪಂಥೀಯ ಸಂಘಟನೆಗೆ ಸೇರಿದ್ದಾರೆ ಎನ್ನಲಾದ ಇಬ್ಬರು ವ್ಯಕ್ತಿಗಳನ್ನುಪೊಲೀಸರು ಬಂಧಿಸಿದ್ದಾರೆ.

ಆಗ್ರಾದ ಪ್ರಸಿದ್ಧ ಪ್ರವಾಸಿ ಸ್ಥಳ ತಾಜ್‌ಮಹಲ್‌ನಲ್ಲಿ ಪ್ಲಾಸ್ಟಿಕ್‌ ಬಾಟಲಿಯಲ್ಲಿ ತಂದಿದ್ದ ‘ಗಂಗಾಜಲ’ ಅರ್ಪಿಸಿದ ಬಲಪಂಥೀಯ ಸಂಘಟನೆಗೆ ಸೇರಿದ್ದಾರೆ ಎನ್ನಲಾದ ಇಬ್ಬರು ವ್ಯಕ್ತಿಗಳನ್ನುಪೊಲೀಸರು ಬಂಧಿಸಿದ್ದಾರೆ.  ಬಲಪಂಥೀಯ ಸಂಘಟನೆಯಾದ ಅಖಿಲ ಭಾರತೀಯ ಹಿಂದೂ ಮಹಾಸಭಾದ ಸದಸ್ಯರೆಂದು ಹೇಳಿಕೊಂಡ ಇಬ್ಬರು ಶ್ರಾವಣ ಶನಿವಾರ ಸಂದರ್ಭದಲ್ಲಿ ತಾಜ್‌ಮಹಲ್‌ ಒಳಗೆ ಟಿಕೆಟ್‌ ಪಡೆದು ಪ್ರವೇಶಿಸಿದ್ದಾರೆ. ಈ ವೇಳೆ ಸಮಾಧಿಯ ನೆಲಮಾಳಿಗೆಗೆ ಹೋಗುವ ಸಂದರ್ಭದಲ್ಲಿ ಮುಚ್ಚಿದ ಮೆಟ್ಟಿಲಿನ ಮೇಲೆ ನೀರಿನ ಬಾಟಲಿಯಲ್ಲಿದ್ದ ಗಂಗಾ ಜಲವನ್ನು ಅರ್ಪಿಸಿದ್ದಾರೆ. ಇವರು ನೀರು ಸುರಿಯುತ್ತಿದ್ದಂತೆ, ಭದ್ರತಾ ಸಿಬ್ಬಂದಿಯು ಇಬ್ಬರನ್ನೂ ಬಂಧಿಸಿದ್ದಾರೆ.

ತಾಜ್‌ಮಹಲ್‌ ಶಿವಮಂದಿರವಾಗಿದೆ. ಅದರ ಮೂಲ ಹೆಸರು ‘ತೇಜೋಮಹಲ್‌’ ಹೀಗಾಗಿ ಪವಿತ್ರ ಗಂಗಾಜಲ ಅರ್ಪಿಸಿದ್ದೇವೆ ಎಂದು ಆರೋಪಿಗಳು ಹೇಳಿದ್ದಾರೆ. ತಾಜ್‌ಮಹಲ್‌ ತೇಜೋಮಹಲ್‌ ಎಂದು ಬದಲಾಯಿಸಬೇಕು ಎಂಬ ವಿವಾದದ ನಡುವೆಯೇ ಈ ಘಟನೆ ನಡೆದಿದೆ. ಇಬ್ಬರು ಗಂಗಾಜಲ ಸುರಿಯುತ್ತಿರುವ ವಿಡಿಯೋ ವೈರಲ್‌ ಆಗಿದೆ. ಕೆಲ ದಿನಗಳ ಹಿಂದಷ್ಟೇ ಅಖಿಲ ಬಾರತ ಹಿಂದೂ ಮಹಾಸಭಾದ ಸದಸ್ಯೆಯೊಬ್ಬರು ಗಂಗಾಜಲ ಅರ್ಪಿಸುವುದಕ್ಕೆ ಯತ್ನಿಸಿದ್ದರು,

ಬೆಂಗಳೂರಿನಲ್ಲಿ ಹೊಸ ಡ್ರಗ್ ಪತ್ತೆ ಮಾಡಿದ್ದೇನೆ: ನಟ ದುನಿಯಾ ವಿಜಯ್

0

ತುಮಕೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೊಸ ರೂಪದ ಡ್ರಗ್ ಹುಟ್ಟಿಕೊಂಡಿದೆ ಇದನ್ನ ನಾವು ತಡೆಗಟ್ಟದೆ ಇದ್ದರೆ ಎಲ್ಲೆಡೆ ವ್ಯಾಪಿಸುತ್ತದೆ ಎಂದು ನಟ ದುನಿಯಾ ವಿಜಯ್ ಆತಂಕ ವ್ಯಕ್ತ ಪಡಿಸಿದ್ದಾರೆ.
ಭೀಮ ಚಿತ್ರದ ರಿಲೀಸ್ ಹಿನ್ನೆಲೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದ ನಟ ದುನಿಯಾ ವಿಜಯ್ ಅವರು ಲಿಂಗೈಕ್ಯ ಶ್ರೀ ಶಿವಕುಮಾರ ಶ್ರೀಗಳ ಗದ್ದುಗೆ ಪೂಜೆ ಸಲ್ಲಿಸಿ ಮಠಾಧ್ಯಕ್ಷ ಸಿದ್ದಲಿಂಗ ಶ್ರೀಗಳ ಆಶಿರ್ವಾದ ಪಡೆದರು. ಬಳಿಕ ಶ್ರೀಗಳ ಜೊತೆ ಮಾತನಾಡುತ್ತಾ ಗುರುಗಳೇ ಬೆಂಗಳೂರಿನಲ್ಲಿ ಹೊಸ ರೀತಿಯ ಡ್ರಗ್ ಹುಟ್ಟಿಕೊಂಡಿದೆ, ಅದನ್ನ ನಾನು ಪತ್ತೆ ಮಾಡಿದ್ದೇನೆ, ಇದನ್ನ ನಾವು ತಡೆಗಟ್ಟದೇ ಇದ್ದರೆ ಎಲ್ಲಾ ಕಡೆ ವ್ಯಾಪಿಸುತ್ತದೆ ಎಂದು ಆತಂಕ ವ್ಯಕ್ತ ಪಡಿಸಿದರು.


ಈ ಡ್ರಗ್ಸ್ ಹೊಸದಾಗಿ ಅವರವರೇ ಕಂಡು ಹಿಡಿದುಕೊಂಡು ಶುರುಮಾಡಿಬಿಡ್ತಾರೆ ಎಂದರು, ತಡೆಗಟ್ಟದೆ ಇದ್ದಲ್ಲಿ ಕರ್ನಾಟಕದಾದ್ಯಂತ ಹರಡಿಕೊಳ್ಳುತ್ತದೆ ಎಂದರು. ಈ ಕುರಿತು ತಮ್ಮ ಮೊಬೈಲ್ ನಲ್ಲಿದ್ದ ಕೆಲ ವಿಷಯಗಳನ್ನ ಗೌಪ್ಯವಾಗಿ ಶ್ರೀಗಳಿಗೆ ತೋರಿಸಿ ಡ್ರಗ್ ಪರಿಣಾಮದ ಕುರಿತು ವಿವರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದಲಿಂಗ ಶ್ರೀಗಳು ಸಿನಿಮಾದವರೆಲ್ಲರೂ ಮನಸು ಮಾಡಿದರೆ ಇದರ ನಿಯಂತ್ರಣ ಸಾಧ್ಯ ಎಂದರು.


ಮಾಧ್ಯಮಗಳೊಂದಿಗೆ ಮಾತನಾಡಿದ ನಟ ವಿಜಯ್ ಆ.9 ರಂದು ಭೀಮ ಚಿತ್ರ ರಿಲೀಸ್ ಆಗುತ್ತಿದೆ, ರಾಜ್ಯದಲ್ಲಿ ಮಕ್ಕಳು ಮಾದಕ ವ್ಯಸನಿಗಳಾಗುತ್ತಿದ್ದು ಇದನ್ನು ತಡೆಗಟ್ಟಲು ಎಲ್ಲರೂ ಕೈಜೋಡಿಸಬೇಕು ಎನ್ನುವ ಉದ್ದೇಶ ಇಟ್ಟುಕೊಂಡು ಭೀಮ ಚಿತ್ರ ಮಾಡಲಾಗಿದೆ.ಬೆಂಗಳೂರಿನಲ್ಲಿ ಹುಟ್ಟಿಕೊಂಡಿರುವ ಹೊಸ ರೀತಿಯ ಮಾದಕ ಅಂಶ ಎಲ್ಲಾ ತಾಲ್ಲೂಕುಗಳಿಗೆ ವ್ಯಾಪಿಸುತ್ತಿದೆ, ಇದನ್ನ ತಡೆಗಟ್ಟಬೇಕಾದ್ದು ನಮ್ಮೆಲ್ಲರ ಕರ್ತವ್ಯ, ಈ ಬಗ್ಗೆ ಶ್ರೀಗಳಿಗೂ ಕೇಳಿಕೊಂಡಿದ್ದೇನೆ ಅವರು ಒಪ್ಪಿಕೊಂಡು ಆಶಿರ್ವಾದ ಮಾಡಿದ್ದಾರೆ ಎಂದರು