ಕುಣಿಗಲ್ :- ಪಟ್ಟಣದ ಪುರಸಭಾ ಸದಸ್ಯ ಹಾಗೂ ಅಂಬರೀಶ್ ಅಭಿಮಾನಿಗಳ ಬಳಗದ ಅಧ್ಯಕ್ಷ ಕೋಟೆ ನಾಗಣ್ಣ ಗುರುವಾರ ರಾತ್ರಿ ಹೃದಯಘಾತದಿಂದ ಮೃತಪಟ್ಟಿದ್ದಾರೆ,
ಗುರುವಾರ ರಾತ್ರಿ 10.30 ರ ಸಂದರ್ಭದಲ್ಲಿ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ಕುಣಿಗಲ್ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸುವ ಪ್ರಯತ್ನವನ್ನು ಕುಟುಂಬ ಸದಸ್ಯರು ಮಾಡಿದ್ದರೂ ಕೂಡ ಪ್ರಯೋಜನವಾಗಿಲ್ಲ,
ಕುಣಿಗಲ್ ನ ಕೋಟೆ ನಾಗಣ್ಣ ಹಲವಾರು ಸಂಘ ಸಂಸ್ಥೆಗಳ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದು ಬಡವರ ಪರ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದರು,
ನಾಗಣ್ಣ ಅವರ ಸಾವು ಕುಣಿಗಲ್ ನ ಬಹುತೇಕ ಸಾರ್ವಜನಿಕರು ಸೇರಿದಂತೆ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ರಾಜಕೀಯ ಮುಖಂಡರಲ್ಲಿ ನೋವು ಉಂಟು ಮಾಡಿದೆ